ತನಿಖೆ ಆರಂಭದಲ್ಲೇ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ: ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
ಬೆಂಗಳೂರು, ಎ.2: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭದಲ್ಲೇ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ. ರಮೇಶ್ ಜಾರಕಿಹೊಳಿ ಹಾಗೂ ಸಂತ್ರಸ್ತ ಯುವತಿಯ ಹೇಳಿಕೆಗಳನ್ನು ಪಡೆಯಲಾಗುತ್ತಿದ್ದು, ಕಾನೂನು ಪ್ರಕಾರವೇ ತನಿಖೆ ನಡೆಯುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ, ಐಜಿಪಿ) ಪ್ರವೀಣ್ ಸೂದ್ ಹೇಳಿದ್ದಾರೆ.
ಶುಕ್ರವಾರ ನಗರದ ಕೋರಮಂಗಲದ ಕೆಎಸ್ಆರ್ಪಿ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರಿಗೆ ಆರೋಗ್ಯ ಸರಿ ಇಲ್ಲ ಎಂಬ ಮಾಹಿತಿ ಇದೆ. ಸಂತ್ರಸ್ತ ಯುವತಿ ವಿಚಾರಣೆಗೆ ಹಾಜರಾಗಲಿದ್ದಾರೆ. ತನಿಖೆಯ ಬಳಿಕ ತಪ್ಪಿತಸ್ಥರು ಯಾರೆಂದು ತಿಳಿಯಲಿದ್ದು, ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಯುವತಿಯಿಂದ ಮಾಹಿತಿ ಕಲೆ ಹಾಕಿದ ಬಳಿಕ ಶುಕ್ರವಾರ ಎಸ್ಐಟಿ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಿದ್ದಾರೆ. ಎಸ್ಐಟಿ ಅವರು ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ ಎಂದು ತಿಳಿಸಿದರು.
Next Story