ಸಿಎಂ ಬಿಎಸ್ವೈಗೆ ಕೊರೋನ ಸೋಂಕು: ಸರ್ವಪಕ್ಷಗಳ ಸಭೆ ಮುಂದೂಡಿಕೆ
ಬೆಂಗಳೂರು, ಎ.17: ರಾಜ್ಯದಲ್ಲಿ ಕೊರೋನ ಎರಡನೆ ಅಲೆ ತೀವ್ರವಾಗಿ ಹರಡುತ್ತಿದ್ದು, ಈ ಸಂಬಂಧ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎ.18ರಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಉಭಯ ಸದನಗಳ ಸರ್ವಪಕ್ಷಗಳ ಮುಖಂಡರ ಸಭೆಯನ್ನು ಮುಂದೂಡಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಮುಖಂಡರ ಸಭೆಯನ್ನು ಮುಂದೂಡಲಾಗಿದೆ.
ಅಶೋಕ್ ನೇತೃತ್ವದಲ್ಲಿ ಸೋಮವಾರ ಸಭೆ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಎ.19ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರಿನ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಸಚಿವರು ಹಾಗೂ ಶಾಸಕರ ಸಭೆಯನ್ನು ಕರೆಯಲಾಗಿದೆ.
Next Story