ಕೋವಿಡ್ ಆತಂಕ: ವಿಟಿಯು ಪರೀಕ್ಷೆ ಮುಂದೂಡಿಕೆಗೆ ಕಾಂಗ್ರೆಸ್ ಒತ್ತಾಯ
ಬೆಂಗಳೂರು, ಎ. 18: ಕೋವಿಡ್ ಆತಂಕದ ಸಂದರ್ಭದಲ್ಲಿ ನಾಳೆಯಿಂದಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಕೂಡಲೇ ಪರೀಕ್ಷೆಯನ್ನು ಮುಂಡೂಡಬೇಕೆಂದು ಕೆಪಿಸಿಸಿ ಒತ್ತಾಯಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ನಡುವೆ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳನ್ನು ಅಪಾಯಕ್ಕೆ ಒಡ್ಡುವುದು ಸರಿಯಲ್ಲವೆಂದು ಎಚ್ಚರಿಸಿದೆ.
ಕೆಆರ್ಎಸ್ ಒತ್ತಾಯ: ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಾಳೆಯಿಂದ ನಡೆಯುತ್ತಿರುವ ವಿಟಿಯು ಪರೀಕ್ಷೆಯನ್ನು ಅನಿರ್ಧಿಷ್ಟಾವಧಿ ಮುಂದೂಡಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿಯ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಒತ್ತಾಯಿಸಿದ್ದಾರೆ.
Next Story