ಕರ್ನಾಟಕ ಲೋಕಸೇವಾ ಆಯೋಗ: ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು, ಎ.21: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರವು ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಲೋಕಸೇವಾ ಆಯೋಗವು ಮುಂದೂಡಿದೆ.
ಈ ಹಿಂದೆ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಎ.22 ರಿಂದ 30ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರವು ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿರುವುದರಿಂದಾಗಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿ ಲೋಕಸೇವಾ ಆಯೋಗವು ಪ್ರಕಟಣೆ ಹೊರಡಿಸಿದೆ.
Next Story