ಬೆದರಿಕೆ ಆರೋಪ: ಮುಹಮ್ಮದ್ ನಲಪಾಡ್ ವಿರುದ್ಧ ದೂರು ನೀಡಿದ ಯುವ ಕಾಂಗ್ರೆಸ್ ಉಪಾಧ್ಯಕ್ಷೆ
ಬೆಂಗಳೂರು, ಎ.22: ಬೆದರಿಕೆಯೊಡ್ಡಿರುವ ಆರೋಪ ಸಂಬಂಧ ಶಾಸಕ ಎನ್.ಎ.ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಲಾಗಿದೆ.
ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ ಎಂಬುವರು ಈ ದೂರು ಸಲ್ಲಿಸಿದ್ದು, ಬುಧವಾರ ಸಂಜೆ ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕೋವಿಡ್ ವಾರ್ ರೂಂ ನಿರ್ಮಾಣದ ಕೆಲಸದ ವೇಳೆ ಅಡ್ಡಿಪಡಿಸಿ ಭವ್ಯಾಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಬಸವಕಲ್ಯಾಣದಲ್ಲಿ ನಡೆದ ಚುನಾವಣಾ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ನಲಪಾಡ್ ತೊಂದರೆ ಕೊಟ್ಟು, ಗೂಂಡಾಗಿರಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಬೆಂಬಲಿಗರು ಹಿಂಸಿಸುತ್ತಿದ್ದಾರೆ. ಹೀಗಾಗಿ ನನಗೆ ರಕ್ಷಣೆ ಕೊಡಿ ಎಂದು ಭವ್ಯ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಕೋರಿದ್ದಾರೆ.
Next Story