ಸಾಯಬೇಕೋ, ವ್ಯಾಪಾರ ಮಾಡಬೇಕೋ ವ್ಯಾಪಾರಸ್ಥರೇ ತೀರ್ಮಾನಿಸಲಿ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ, ಎ.23: ಸಾಯಬೇಕೋ, ವ್ಯಾಪಾರ ಮಾಡಬೇಕೋ ವ್ಯಾಪಾರಸ್ಥರೇ ತೀರ್ಮಾನಿಸಲಿ. ಬದುಕಿದ್ದರೆ ತಾನೆ ವ್ಯಾಪಾರ ಮಾಡಲು ಆಗುವುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಗಾಂಧಿ ಬಜಾರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಲ್ಪ ದಿನ ವ್ಯಾಪಾರ ನಿಲ್ಲಿಸಿ, ಮನೆಯವರ ಜೊತೆ ಸಂತೋಷದಿಂದ ಕಾಲ ಕಳೆಯುವುದು ಒಳ್ಳೆಯದು. ಕೋವಿಡ್ ತಗಲಿ ಆಸ್ಪತ್ರೆಗೆ ಹೋಗಿ ಸತ್ತರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದರು.
ದೆಹಲಿಯಲ್ಲಿ ಪರಿಸ್ಥಿತಿ ಕೈಮೀರಿ ಹೋಗಿದೆ. ಅಲ್ಲಿ ಲಾಕ್ ಡೌನ್ ಮಾಡಲಾಗಿದೆ. ಅಲ್ಲಿ ಬೆಡ್ ಇಲ್ಲ, ಆಕ್ಸಿಜನ್ ಇಲ್ಲವಾಗಿದೆ. ದೆಹಲಿ, ಬೆಂಗಳೂರು ಮಟ್ಟಕ್ಕೆ ರಾಜ್ಯದ ಉಳಿದ ಜಿಲ್ಲೆಗಳು ಹೋಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ. ಹಾಗಾಗಿ ಜನರು ಜಾಗೃತರಾಗಿರಬೇಕು ಎಂದರು.
Next Story