ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಉಚಿತವಾಗಿ 5 ಕೆಜಿ ಅಕ್ಕಿ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಎ. 25: `ಕೋವಿಡ್-19 ಸೋಂಕಿನ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ದೇಶದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಇದೇ ಮೇ ಮತ್ತು ಜೂನ್ ತಿಂಗಳಲ್ಲಿ `ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ' ಫಲಾನುಭವಿಗಳಿಗೆ 5 ಕಿ.ಜಿ. ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಸುಮಾರು 4.10 ಕೋಟಿ ಜನರಿಗೆ ಈ ನೆರವು ದೊರೆಯಲಿದೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ರವಿವಾರ ಟ್ವೀಟ್ ಮಾಡಿರುವ ಅವರು, `ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ'ಯಡಿ ಕೇಂದ್ರ ಸರಕಾರ ಉಚಿತ ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದು, ಕೊರೋನ ಸಂಕಷ್ಟದ ನಡುವೆ ಬಡಜನರಿಗೆ ನೆರವಿಗೆ ಧಾವಿಸಿರುವ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ.ವೆಚ್ಚದಲ್ಲಿ ಮೇ ಮತ್ತು ಜೂನ್ ತಿಂಗಳಿನಲ್ಲಿ 5 ಕೆ.ಜಿ. ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ದೇಶದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಪ್ರಧಾನಿ ಶ್ರೀ @narendramodi ಸರ್ಕಾರ, ಇದೇ ಮೇ ಮತ್ತು ಜೂನ್ ತಿಂಗಳಲ್ಲಿ #PMGaribKalyanAnnYojana ಫಲಾನುಭವಿಗಳಿಗೆ 5 ಕಿ.ಗ್ರಾಂ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಸುಮಾರು 4.10 ಕೋಟಿ ಜನರಿಗೆ ಈ ನೆರವು ದೊರೆಯಲಿದೆ. @BSYBJP pic.twitter.com/4lvXdEa4wA
— CM of Karnataka (@CMofKarnataka) April 25, 2021