ವಿಜಯಪುರ: ಕೋವಿಡ್ ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಮರೆವಣಿಗೆ ನಡೆಸಿದ ಕಲ್ಲಿನಾಥ ಸ್ವಾಮೀಜಿ
ವಿಜಯಪುರ, ಎ.28: ಕೋವಿಡ್ ನಿಯಮ ಉಲ್ಲಂಘಿಸಿ ಕಲ್ಲಿನಾಥ ಸ್ವಾಮೀಜಿ ಎಂಬವರು ಪಲ್ಲಕ್ಕಿ ಮೆರವಣಿಗೆ ನಡೆಸಿದ ಘಟನೆ ಕೊಲ್ಹಾರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ, ಬುಧವಾರ ಕಲ್ಲಿನಾಥ ಸ್ವಾಮೀಜಿ ಪಟ್ಟಣದಲ್ಲಿ ಭಕ್ತರನ್ನು ಕರೆದುಕೊಂಡು ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಮರೆವಣಿಗೆ ನಡೆಸಿದ್ದಾರೆ ಎನ್ನಲಾಗಿದೆ.
ತಹಶೀಲ್ದಾರ್ ಹಾಗೂ ಪೊಲೀಸರು ಪಲ್ಲಕ್ಕಿ ಮೆರವಣಿಗೆ, ಜಾತ್ರೆ ನಡೆಸದಂತೆ ಸೂಚಿಸಿದ್ದರೂ ಸಹ ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿ ಪಲ್ಲಕ್ಕಿ ಮೆರವಣಿಗೆ ಮಾಡಿಸಿಕೊಂಡಿದ್ದಾರೆ ಎಂದು ದೂರಲಾಗಿದೆ.
Next Story