ಮೊಬೈಲ್ ಸಂದೇಶ ನಂಬಿ 7 ಲಕ್ಷ ರೂ. ಕಳೆದುಕೊಂಡ ಉದ್ಯಮಿ
ಬೆಂಗಳೂರು, ಮೇ 2: ಮೊಬೈಲ್ನಲ್ಲಿ ಸಂದೇಶ ಕಳುಹಿಸಿ ನಗರದ ಮಾರತ್ತಹಳ್ಳಿಯ ಉದ್ಯಮಿಯೊಬ್ಬರಿಗೆ 7 ಲಕ್ಷ ರೂ. ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕೆಲ ದಿನಗಳ ಹಿಂದೆ ಅಮೆರಿಕಾದಲ್ಲಿನ ಉದ್ಯಮಿ ಸ್ನೇಹಿತ ಸಂಜಯ್ ಸಿಂಗ್ ಹೆಸರಲ್ಲಿ ಮೊಬೈಲ್ಗೆ ಸಂದೇಶ ಬಂದಿತ್ತು. ಅದರಲ್ಲಿ ನಾನು ಅನಾರೋಗ್ಯ ಸಮಸ್ಯೆಗೆ ಸಿಲುಕಿದ್ದು ಅದಷ್ಟು ಬೇಗ ಹಣ ಕಳುಹಿಸುವಂತೆ ಮನವಿ ಮಾಡಲಾಗಿತ್ತು.
ಈ ರೀತಿಯ ಸಂದೇಶ ನೋಡಿ ಆತಂಕಗೊಂಡ ಉದ್ಯಮಿ ಗೆಳೆಯ ಖಾತೆಗೆ 7 ಲಕ್ಷ ರೂ.ಗಳನ್ನು ಜಮಾ ಮಾಡಿದ್ದಾರೆ. ಬಳಿಕ ಪರಿಶೀಲನೆ ನಡೆಸಿದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗಿದೆ ಎಂದು ಸಿಎನ್ಎನ್ ಪೊಲೀಸರು ತಿಳಿಸಿದ್ದಾರೆ.
Next Story