ನನ್ನ ಸಾವಿನ ಬಗ್ಗೆ ಹಬ್ಬಿರುವ ಸುದ್ದಿ ಸುಳ್ಳು: ನಟ ದೊಡ್ಡಣ್ಣ
ಬೆಂಗಳೂರು, ಮೇ 5: ನಾಡಿನ ಜನರ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಸಾವಿನ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಇದರ ಬಗ್ಗೆ ಯಾರು ಕಿವಿಗೊಡಬಾರದೆಂದು ನಟ ದೊಡ್ಡಣ್ಣ ತಿಳಿಸಿದ್ದಾರೆ.
ಈ ಕುರಿತು ನಾಡಿನ ಜನತೆಗೆ ಮನವಿ ಮಾಡಿರುವ ಅವರು, ನಾನು ಮನೆಯಲ್ಲಿಯೇ ಸುರಕ್ಷಿತವಾಗಿದ್ದು, ಆರೋಗ್ಯವಾಗಿದ್ದೇನೆ. ಆದರೂ ಕೆಲವರು ದುರುದ್ದೇಶಪೂರ್ವಕವಾಗಿ ನನ್ನ ಸಾವಿನ ಸುದ್ದಿ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರಿಂದ ಗೆಳೆಯರು, ಅಭಿಮಾನಿಗಳು ನಿರಂತರವಾಗಿ ದೂರವಾಣಿ ಕರೆ ಮಾಡುತ್ತಿದ್ದಾರೆ. ಹೀಗಾಗಿ ಯಾರು ಆತಂಕ ಪಡುವ ಅಗತ್ಯವಿಲ್ಲವೆಂದು ತಿಳಿಸಿದ್ದಾರೆ.
Next Story