ಕರಾವಳಿಯಲ್ಲಿ ಚಂಡಮಾರುತ: ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರಿಂದ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ
ಬೆಂಗಳೂರು, ಮೇ 16: ಕರಾವಳಿ ಭಾಗದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗು ಉಸ್ತುವಾರಿ ಸಚಿವರುಗಳಿಂದ ಮಾಹಿತಿ ಪಡೆದುಕೊಂಡು, ಅಗತ್ಯ ಸೂಚನೆ ನೀಡಿದ್ದಾರೆ
ಕೋವಿಡ್ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಸರ್ಕಾರದಿಂದ ಯಾವುದೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರುಗಳಿಗೆ ಅಥವಾ ತಮಗೆ ನೇರವಾಗಿ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಕರಾವಳಿ ಪ್ರದೇಶಗಳಲ್ಲಿನ ಚಂಡಮಾರುತದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಸಂತ್ರಸ್ತ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಡಿಸಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-ಯಡಿಯೂರಪ್ಪ, ಸಿಎಂ ( ಟ್ವೀಟ್)
ಕರಾವಳಿ ಭಾಗದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿ @BSYBJP ರವರು ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗು ಉಸ್ತುವಾರಿ ಸಚಿವರುಗಳಿಂದ ಮಾಹಿತಿ ಪಡೆದುಕೊಂಡು, ಅಗತ್ಯ ಸೂಚನೆ ನೀಡಿದ್ದಾರೆ. (1/2)
— CM of Karnataka (@CMofKarnataka) May 16, 2021