ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆಗೆ ವಿದ್ಯುತ್ ಪೂರೈಕೆಗೆ ಸಚಿವ ಆನಂದ್ ಸಿಂಗ್ ಚಾಲನೆ
ಬಳ್ಳಾರಿ, ಮೇ 17: ಜಿಂದಾಲ್ ಎದುರುಗಡೆ ನಿರ್ಮಿಸಲಾಗಿರುವ ಒಂದು ಸಾವಿರ ಆಕ್ಸಿಜನ್ ಬೆಡ್ಗಳ ತಾತ್ಕಾಲಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ಸಿಂಗ್ ಸೋಮವಾರ ಚಾಲನೆ ನೀಡಿದರು.
ಒಂದು ಸಾವಿರ ಆಕ್ಸಿಜನ್ ಬೆಡ್ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಪರಿವರ್ತಕಗಳ ಬಳಿಯ ಯಂತ್ರಗಳಿಗೆ ಆನಂದಸಿಂಗ್ ಪೂಜೆ ಸಲ್ಲಿಸಿ ಬಟನ್ ಒತ್ತುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಮ್ಸ್ ನಿವೃತ್ತ ನಿರ್ದೇಶಕ ಡಾ.ದೇವಾನಂದ್, ತಾತ್ಕಾಲಿಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಂದಾಲ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
Next Story