-

ಬ್ಲ್ಯಾಕ್‌ ಫಂಗಸ್‌ ಗೆ ಹೆಚ್ಚಿನ ಪ್ರಮಾಣದ ಔಷಧ ಪೂರೈಸಲು ಕೇಂದ್ರಕ್ಕೆ ಮನವಿ: ಆರೋಗ್ಯ ಸಚಿವ ಸುಧಾಕರ್‌

-

ದಾವಣಗೆರೆ, ಮೇ 21: ರಾಜ್ಯದ ಕೆಲವೆಡೆ ಕಾಣಿಸಿಕೊಂಡಿರುವ ಬ್ಲಾಕ್‌ ಫಂಗಸ್‌ ರೋಗದ ಬಗ್ಗೆ ಕೆಲವರು ವದಂತಿಗಳನ್ನು ಹರಡಿಸುತ್ತಿದ್ದು ಈ ಬಗ್ಗೆ ಜನತೆ ಭಯ ಭೀತರಾಗುವ ಅಗತ್ಯವಿಲ್ಲ. ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಶುಕ್ರವಾರ ದಾವಣಗೆರೆಯಲ್ಲಿ ಕೋವಿಡ್‌ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಶಿಲೀಂದ್ರದಿಂದ ಉಂಟಾಗುವ ರೋಗ. ಇದಕ್ಕೆ ಅನೇಕ ಕಾರಣಗಳಿವೆ. ಅತಿಯಾದ ಸ್ಟಿರಾಯ್ಡ್‌ ಸೇವನೆ, ಹೆಚ್ಚಿನ ಆಕ್ಸಿಜನ್‌ ಬಳಕೆ, ಹೆಚ್ಚು ಅವಧಿಗೆ ಐಸಿಯುನಲ್ಲಿರುವುದು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು, ಮಧುಮೇಹ, ಮೂತ್ರಪಿಂಡ, ಕ್ಯಾನ್ಸರ್‌ ಮುಂತಾದ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಆಗಿದ್ದಲ್ಲಿ ಅಂತವರಿಗೆ ಕೋವಿಡ್‌ ಬಂದು ಹೋದ ನಂತರ ಈ ಕಾಯಿಲೆ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿದರು.

ಈಗಾಗಲೇ ಈ ರೋಗದ ಪತ್ತೆ, ಚಿಕಿತ್ಸೆ ಮತ್ತು ಔಷಧೋಪಚಾರಗಳ ಬಗ್ಗೆ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಇಂದು ಅವರು ವರದಿ ನೀಡುವ ನಿರೀಕ್ಷೆಯಿದೆ. ಆರಂಭಿಕ ಹಂತದಲ್ಲಿ ಇಎನ್‌ಟಿ ತಜ್ಞರು ಪರಿಶೀಲನೆ ನಡೆಸಬೇಕು. ಹೀಗಾಗಿ ಕೋವಿಡ್‌ ನಿಂದ ಗುಣಮುಖರಾದ ಎಲ್ಲರಲ್ಲಿ ಈ ಕಾಯಿಲೆ ಸಂಬಂಧ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರಕ್ಕೆ ಮನವಿ: ಫಂಗಸ್‌ ಚಿಕಿತ್ಸೆಗೆ ಸಂಬಂಧಿಸಿದ ಔಷಧದ ಸರಬರಾಜು ಕಡಿಮೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಕಳುಹಿಸಿಕೊಡುವಂತೆ ಕೇಂದ್ರ ಸಚಿವ ಸದಾನಂದಗೌಡರಿಗೆ ಮನವಿ ಮಾಡಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಔಷಧ ಲಭ್ಯವಾಗಲಿದೆ. ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆಯನ್ನೂ ನೀಡಲಾಗಿದೆ. ಹೀಗಾಗಿ ಜನರು ಆತಂಕ ಪಡುವ ಭಯಭೀತರಾಗುವ ಅಗತ್ಯವಿಲ್ಲ ಎಂದರು.

ಇನ್ನೂ ಕೋವಿಡ್‌ ಎರಡನೇ ಅಲೆ ಕೆಲ ಜಿಲ್ಲೆಗಳಲ್ಲಿ ಹೊರತುಪಡಿಸಿ ಹೆಚ್ಚಿನ ಜಿಲ್ಲೆಗಳಲ್ಲಿ ಇಳಿಮುಖ ಸ್ಥಿತಿಯಲ್ಲಿದೆ. ಇದು ಸಮಾಧಾನಕರ ಅಂಶ. ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮ ಮತ್ತು ಜನತೆಯ ಸಹಕಾರದಿಂದ ಇದು ಸಾಧ್ಯವಾಗಿದೆ. ಇದೇ ರೀತಿ ಜನತೆ ಸಹಕಾರ ನೀಡಿದರೆ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ ಎಂದು ತಿಳಿಸಿದರು.

ಕೆಲ ಲೋಪಗಳಿವೆ: ಕೋವಿಡ್‌ ನಿಯಂತ್ರಣ ವಿಷಯಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯಲ್ಲಿ ಕೆಲ ನ್ಯೂನ್ಯತೆಗಳಿವವೆ. ಅವುಗಳ ನಿವಾರಣೆಗೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಆರು ತಿಂಗಳ ಹಿಂದೆಯೇ ಕಳುಹಿಸಿಕೊಟ್ಟಿದ್ದ ವೆಂಟಿಲೇಟರ್‌ಗಳನ್ನು ಕೆಲ ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಿಲ್ಲ. ಹಾಗೆಯೇ ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್‌ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲ. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್‌ ಆರೈಕೆ ಕೇಂದ್ರಗಳಿಗೆ ಕಡ್ಡಾಯವಾಗಿ ದಾಖಲು ಮಾಡಿ ಔಷಧೋಪಚಾರ ನೀಡಲು ಸೂಚಿಸಲಾಗಿದೆ. ಮುಂದಿನ ವಾರದೊಳಗೆ ಈ ಎಲ್ಲಾ ಲೋಪಗಳನ್ನು ಸರಿಪಡಿಸಲು ಗಡುವು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಇರುವ ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಶೇಕಡಾ ಎಪ್ಪತ್ತೈದರಷ್ಟು ಹಾಸಿಗೆಗಳನ್ನು ನೀಡಬೇಕು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ಐವತ್ತರಷ್ಟು ಹಾಸಿಗೆ ನೀಡಬೇಕು ಎಂಬ ವಿಷಯ ಸರಿಯಾಗಿ ಪಾಲನೆ ಆಗಿಲ್ಲ. ಒಂದೆರಡು ದಿನದಲ್ಲಿ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಜರುಗಿಸಬೇಕು. ಅಗತ್ಯವಾದರೆ ಕಾನೂನು ಮೂಲಕ ಶಿಸ್ತುಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕೊರತೆ ಇಲ್ಲ: ಜಿಲ್ಲೆಯಲ್ಲಿ ಆಕ್ಸಿಜನ್‌ ಮತ್ತು ಔಷಧಗಳ ಕೊರತೆಯಿಲ್ಲ. ಅಗತ್ಯ ಪ್ರಮಾಣದ ಎಲ್ಲ ನೆರವನ್ನೂ ಒದಗಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಸೇರಿರುವ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ ನೂರು ಹಾಸಿಗೆಗಳಿಗೆ ಆಕ್ಸಿಜನ್‌ ಸಂಪರ್ಕ ನೀಡುವ ಆಲೋಚನೆ ಇದೆ. ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ ಹಾಸಿಗೆಗಳಿಗೆ ಆಕ್ಸಿಜನ್‌ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ವ್ಯಾಕ್ಸಿನ್‌ ವಿಷಯದಲ್ಲೂ ಕೊರೋನ ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಶಿಕ್ಷಕರನ್ನೂ ಆ ಪಟ್ಟಿಗೆ ಸೇರಿಸಲಾಗಿದೆ. ಒಟ್ಟಾರೆ ಮೂರನೇ ಅಲೆ ಬರುವ ವೇಳೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಖಾಲಿ ಇರುವ ವೈದ್ಯರ ಬಹುತೇಕ ಎಲ್ಲಾ ಹುದ್ದೆಗಳನ್ನು ಒಂದು ವಾರದಲ್ಲಿ ತುಂಬಲಾಗುವುದು. ಹಾಗೆಯೇ ತಜ್ಞರ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ಕೆಲ ದಿನಗಳಲ್ಲಿ ಆ ಪ್ರಕ್ರಿಯೆ ಕೂಡ ಮುಗಿಯಲಿದೆ. ಗುತ್ತಿಗೆ ಆಧಾರದಲ್ಲಿ ಅಗತ್ಯ ಸಂಖ್ಯೆ ಸಿಬ್ಬಂದಿ ನೇಮಕ ಅಧಿಕಾರವನ್ನೂ ಜಿಲ್ಲಾಡಳಿತಗಳಿಗೆ ನೀಡಲಾಗಿದೆ ಎಂದು ಸಚಿವ ಸುಧಾಕರ್‌ ವಿವರಿಸಿದರು. 

ಸಂಸದರಾದ ಜಿ.ಎಂ, ಸಿದ್ದೇಶ್ವರ್‌, ನಗರ ಪಾಲಿಕೆ  ಮೇಯರ್‌ ಎಸ್‌,ಟಿ ವಿರೇಶ್‌, ಚನ್ನಗಿರಿ ಶಾಸಕ ಮಾಡಾಳು ವೀರೂಪಾಕ್ಷಪ್ಪ, ದಾವಣಗೆರೆ ಶಾಸಕ ರವೀಂದ್ರನಾಥ್‌, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ಹರಿಹರ ಶಾಸಕ ಎಸ್. ರಾಮಪ್ಪ, ವಿಧಾನಪರಿಷತ್‌ ಸದಸ್ಯ ಭೋಜೇಗೌಡ, ಜಿಲ್ಲಾಧಿಕಾರಿ ಮಹಂತೇಶ್‌ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಮಹಂತೇಶ್‌, ಎಸ್ಪಿ ಹನುಮಂತರಾಯ, ಡಿಎಚ್‌ಒ ಡಾ. ನಾಗರಾಜ್‌ ಅವರು ಸಭೆಯಲ್ಲಿ ಹಾಜರಿದ್ದರು.

ಚಿಗಟೇರಿ ಆಸ್ಪತ್ರೆಗೆ ಭೇಟಿ 

ಇದಕ್ಕೂ ಮೊದಲು ಬೆಳಗ್ಗೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುಧಾಕರ್‌ ಅವರು ಒಂದೂವರೆ ತಾಸಿಗೂ ಹೆಚ್ಚು ಕಾಲ ಕೋವಿಡ್‌ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಕಂಡು ಬಂದ ಲೋಪಗಳ ಬಗ್ಗೆ ಅಧಿಕಾರಿಗಳನ್ನುತರಾಟೆ ತೆಗೆದುಕೊಂಡ ಸಚಿವರು, ಎಲ್ಲಾ ಕೊರತೆಗಳನ್ನು ಒಂದೆರಡು ದಿನಗಳಲ್ಲಿ ನಿವಾರಿಸಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top