ರಾಜ್ಯದಲ್ಲಿ ಜೂ.13ರಿಂದ ಮುಂಗಾರು ಚುರುಕು: ಕರಾವಳಿಯಲ್ಲಿ ಜೂ.14ರಂದು ರೆಡ್ ಅಲರ್ಟ್
ಬೆಂಗಳೂರು, ಜೂ.10: ತೇವಾಂಶ ಕೊರತೆ ಹಾಗೂ ಗಾಳಿಯ ವೇಗ ಇಲ್ಲದಿರುವ ಕಾರಣ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ದುರ್ಬಲಗೊಂಡಿರುವ ಮುಂಗಾರು ಮಾರುತಗಳು ಜೂ.13ರಿಂದ ಚುರುಕು ಪಡೆದುಕೊಳ್ಳಲಿವೆ.
ಈ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂ.13ರಂದು ಆರೆಂಜ್, ಜೂ.14ರಂದು ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.13ರಿಂದ 2 ದಿನ ಆರೆಂಜ್ ಅಲರ್ಟ್ ಇದ್ದರೆ, ಬಳ್ಳಾರಿ, ಚಿತ್ರದುರ್ಗ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Next Story