ಹಿರಿಯ ಕವಿ ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಬೆಂಗಳೂರು, ಜೂ.11: ಹಿರಿಯ ಕವಿ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಡಾ.ಸಿದ್ದಲಿಂಗಯ್ಯ ಅವರು ತಮ್ಮ ಸಮೃದ್ಧವಾದ ಬರಹಗಳು, ಕವನಗಳು ಮತ್ತು ಅವರು ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆಗಳ ಮೂಲಕ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನ ಸುದ್ದಿ ಬೇಸರ ತರಿಸಿದೆ. ಅಭಿಮಾನಿಗಳು ಮತ್ತು ಕುಟುಂಬಸ್ಥರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ದೊರೆಯಲಿ ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ.
Next Story