ಸಹೋದರನ ಪುತ್ರ ಹರ್ಷಿತ್ ಜನ್ಮ ದಿನ: ಹುಲಿ ದತ್ತು ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ, ಜೂ.14: ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮ ದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ 'ಶೌರ್ಯ' ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.
ಆರಂಭಿಕವಾಗಿ 1 ಲಕ್ಷ ಚೆಕ್ ಅನ್ನು ಅರಣ್ಯಾಧಿಕಾರಿಗೆ ಹಸ್ತಾಂತರಿಸಿದ್ದೇನೆ. ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿದ್ದೇನೆ. ಲಾಕ್ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಹೇಳಿದ್ದಾರೆ.
ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಲಿ ದತ್ತು ಸ್ವೀಕರಿಸಿದ್ದೇನೆ. ಸಾರ್ವಜನಿಕರು ಪ್ರಾಣಿಗಳ ದತ್ತು ಪಡೆಯಬೇಕು ಎಂದು ಸಲಹೆ ನೀಡಿದರು.
ಮುಖಂಡ ಚನ್ನರಾಜ ಹಟ್ಟಿಹೊಳಿ, ಡಿಎಫ್ಒ ಅಮರನಾಥ ರೆಡ್ಡಿ ಉಪಸ್ಥಿತರಿದ್ದರು.
Next Story