ಪತ್ನಿಯ ಸಾವಿನಿಂದ ನೊಂದು ಪತಿ, ಇಬ್ಬರು ಮಕ್ಕಳು ಆತ್ಮಹತ್ಯೆ
ಬೆಳಗಾವಿ, ಜೂ. 20: ಹೃದಯಾಘಾತದಿಂದ ಪತ್ನಿ ಸಾವನ್ನಪ್ಪಿದ ಕಾರಣದಿಂದಾಗಿ ಮನನೊಂದು ಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಕಾಡಪ್ಪ ರಂಗಾಪುರೆ(47), ಇವರ ಮಕ್ಕಳಾದ ಕೀರ್ತಿ ರಂಗಾಪುರೆ(20) ಹಾಗೂ ಸ್ಫೂರ್ತಿ ರಂಗಾಪುರೆ(18) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.
ವಾರದ ಹಿಂದೆ ಕಾಡಪ್ಪ ರಂಗಾಪುರೆ ಪತ್ನಿ ಚೆನ್ನವ್ವ ರಂಗಾಪುರೆ (40) ಸಾವನ್ನಪ್ಪಿದ್ದರು. ಚೆನ್ನವ್ವರ ಅಗಲಿಕೆಯಿಂದ ಮನನೊಂದ ಪತಿ ಕಾಡಪ್ಪ ಹಾಗೂ ಇಬ್ಬರು ಹೆಣ್ಣುಮಕ್ಕಳು ಇದೀಗ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಚಿಕ್ಕೋಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
Next Story