ಕಾರ್ಮಿಕರಿಗೆ ನೀಡಲಾಗುವ ಧನ ಸಹಾಯದಲ್ಲಿ ಹೆಚ್ಚಳ: ಸಚಿವ ಶಿವರಾಮ್ ಹೆಬ್ಬಾರ್
ಬೆಂಗಳೂರು, ಜು.1: ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡಲಾಗುತ್ತಿರುವ ಧನ ಸಹಾಯದಲ್ಲಿ ಹೆಚ್ಚಳ ಮಾಡಲಾಗಿದ್ದು, ಪಿಂಚಣಿ ಸೌಲಭ್ಯವನ್ನು 2 ಸಾವಿರದಿಂದ 3 ಸಾವಿರ ರೂಪಾಯಿಗೆ ಏರಿಸಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಗುರುವಾರ ನಗರದ ಕಾರ್ಮಿಕ ಕಲ್ಯಾಣ ಭವನದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಮಂಡಳಿಯ ನಿರ್ದೇಶಕರೊಂದಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.
ಕುಟುಂಬ ಪಿಂಚಣಿಯನ್ನು 1 ಸಾವಿರದಿಂದ 2 ಸಾವಿರ ರೂಪಾಯಿವರೆಗೆ ಹೆಚ್ಚಿಸಲಾಗಿದೆ. ಹೆರಿಗೆ ಸೌಲಭ್ಯಗಳನ್ನು 20 ಸಾವಿರದಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ. ಮಂಡಳಿ ವತಿಯಿಂದ ಹೆಣ್ಣು ಮಗುವಿಗೆ ನೀಡಲಾಗುತ್ತಿದ್ದ 30 ಸಾವಿರ ರೂಪಾಯಿಯನ್ನು 35 ಸಾವಿರ ರೂಪಾಯಿಗಳಿಗೆ ಏರಿಸಲಾಗಿದೆ ಎಂದು ತಿಳಿಸಿದರು.
ನರ್ಸರಿ ವಾರ್ಷಿಕ ಸಹಾಯ ಧನವನ್ನು 3 ಸಾವಿರದಿಂದ 5 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ. 1 ರಿಂದ 4ನೆ ತರಗತಿಯ ಮಕ್ಕಳಿಗೆ 3 ರಿಂದ 5 ಸಾವಿರ, 5 ರಿಂದ 8 ನೆ ತರಗತಿಯ ಮಕ್ಕಳಿಗೆ 5 ಸಾವಿರ ದಿಂದ 8 ಸಾವಿರ, 9 ರಿಂದ 10 ನೆ ತರಗತಿಯ ಮಕ್ಕಳಿಗೆ 10 ರಿಂದ 12 ಸಾವಿರ, ಪ್ರಥಮ ಪಿಯುಸಿ ಮಕ್ಕಳಿಗೆ 10 ಸಾವಿರದಿಂದ 15 ಸಾವಿರ, ಐಟಿಐಯವರಿಗೆ 12 ಸಾವಿರದಿಂದ 20 ಸಾವಿರ, ಪದವಿ ವಿಧ್ಯಾರ್ಥಿಗಳಿಗೆ 15 ಸಾವಿರದಿಂದ 25 ಸಾವಿರ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 25 ಸಾವಿರದಿಂದ 40 ಸಾವಿರ ಏರಿಸಲಾಗಿದೆ, ಡಿಪೆÇ್ಲಮಾ ವಿದ್ಯಾರ್ಥಿಗಳಿಗೆ 15 ಸಾವಿರದಿಂದ 20 ಸಾವಿರ, ಎಮ್ಬಿಬಿಎಸ್ ವಿದ್ಯಾರ್ಥಿಗಳಿಗೆ 30 ಸಾವಿರದಿಂದ 50 ಸಾವಿರ ಎಮ್.ಡಿ ವಿದ್ಯಾರ್ಥಿಗಳಿಗೆ 45 ರಿಂದ 70 ಸಾವಿರ ಪಿಎಚ್.ಡಿ ವಿದ್ಯಾರ್ಥಿಗಳಿಗೆ 25 ರಿಂದ 50 ಸಾವಿರಗಳಷ್ಟು ಸಹಾಯ ಧನವನ್ನು ಹೆಚ್ಚಿಸಲಾಗಿದೆ ಎಂದರು.
ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಹಾಗೂ ಐಐಟಿಗಳಲ್ಲಿ ವ್ಯಾಸಂಗ ಮಾಡುವ ಕಟ್ಟಡ ಕಾರ್ಮಿಕರ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚದಲ್ಲಿ ಮಂಡಳಿ ಭರಿಸಲಿದೆ, ಪ್ಯಾರಾ ಮೆಡಿಕಲ್, ಬಿಎಡ್ ಕೋರ್ಸ್ಗಳನ್ನು ಹೊಸದಾಗಿ ಸೇರಿಸಲಾಗಿದೆ, ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 30 ಸಾವಿರ ಹಾಗೂ ಇತರೆ ವೃತ್ತಿಪರ ಕೋರ್ಸ್ಗಳಿಗೆ ಸಹಾಯ ಧನವನ್ನು ನೀಡಲಾಗುವುದು ಎಂದು ತಿಳಿಸಿದರು.
ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯ ಧನವನ್ನು 10 ಸಾವಿರದಿಂದ 20 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ವಿವಾಹ ಸಹಾಯಧನವನ್ನು 50 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಳ ಮಾಡಲಾಗಿದೆ. ಈ ಎಲ್ಲ ನೂತನ ಪರಿಷ್ಕøತ ಸಹಾಯ ಧನವನ್ನು ಇಂದಿನಿಂದಲ್ಲೆ ಜಾರಿಗೊಳಿಸುವಂತೆ ಮಾನ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಸುಮಾರು 8 ಲಕ್ಷಕ್ಕೂ ಅಧಿಕ ಕಾರ್ಮಿಕ ಈ ಸೌಲಭ್ಯ ಸಹಾಯವನ್ನು ಪಡೆಯಲ್ಲಿದ್ದಾರೆ ಮಂಡಳಿಯು ವಾರ್ಷಿಕವಾಗಿ ಸುಮಾರು 100 ಕೋಟಿ ರೂಪಾಯಿಗಳನ್ನು ಈ ಎಲ್ಲಾ ಯೋಜನೆಗಳಿಗೆ ವೆಚ್ಚ ಮಾಡಲಿದ್ದೆ ಎಂದು ಅಂದಾಜಿಸಲಾಗಿದೆ.
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ವತಿಯಿಂದ ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ವಿಶೇಷ ಅದಾಲತ್ ಮೂಲಕವಾಗಿ ಸಹಾಯ ಧನವನ್ನು ಪಡೆಯುವುದಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲರ ಅರ್ಜಿಯನ್ನು ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ, ಕಾರ್ಮಿಕ ಆಯುಕ್ತ ಅಕ್ರಂ ಪಾಷಾ ಸೇರಿ ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಜರಿದ್ದರು.