ಪೈಪ್ನಲ್ಲಿ ಸಿಲುಕಿದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಡಿಸಿಎಂ
ಬೆಂಗಳೂರು, ಜು. 4: ರಾಮನಗರ ಬೈಪಾಸ್ ರಸ್ತೆ ಸಮೀಪದ ಪೈಪ್ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯೊಬ್ಬರನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಣೆ ಮಾಡಿದ ರಾಮನಗರ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿನಂದಿಸಿದ್ದಾರೆ.
ರವಿವಾರ ಈ ಸಂಬಂಧ ಹೇಳಿಕೆ ನೀಡಿರುವ ಅವರು, ಸದ್ಯದಲ್ಲೇ ನಾನು ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದೇನೆ. ಆ ಸಂದರ್ಭದಲ್ಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲ ಸಿಬ್ಬಂದಿಯನ್ನೂ ಗೌರವಿಸಲಾಗುವುದು ಹಾಗೂ ಅವರಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.
ಪೈಪಿನಲ್ಲಿ ಸಿಲುಕಿದ್ದ ವ್ಯಕಿಯನ್ನು ರಕ್ಷಿಸಲು ಅತ್ಯಂತ ನಾಜೂಕು ಮತ್ತು ಎಚ್ಚರಿಕೆಯಿಂದ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದೆ. ಅತ್ಯಂತ ವೃತ್ತಿಪರವಾಗಿ ಕಾರ್ಯಾಚರಣೆ ಇದು. ಒಂದು ಅಮೂಲ್ಯ ಜೀವ ರಕ್ಷಿಸಿದ ಎಲ್ಲ ಸಿಬ್ಬಂದಿಗೆ ನನ್ನ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ರಾಮನಗರ ಬೈಪಾಸ್ ರಸ್ತೆ ಸಮೀಪದ ಪೈಪ್ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯೊಬ್ಬರನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಣೆ ಮಾಡಿದ ರಾಮನಗರ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಭಿನಂದನೆಗಳು.
— Dr. Ashwathnarayan C. N. (@drashwathcn) July 4, 2021
ಸದ್ಯದಲ್ಲೇ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದೇನೆ. ಆ ಸಂದರ್ಭದಲ್ಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲ ಸಿಬ್ಬಂದಿಯನ್ನೂ ಗೌರವಿಸಲಾಗುವುದು.