ಹಿರಿಯ ಕನ್ನಡಪರ ಚಿಂತಕ ಧಾರವಾಡದ ಕೃಷ್ಣ ಜೋಶಿ ನಿಧನ
ಧಾರವಾಡ, ಜು.8: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷರಾಗಿದ್ದ ಹಿರಿಯ ಕನ್ನಡಪರ ಚಿಂತಕ ಕೃಷ್ಣ ಜೋಶಿ(76) ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಜೋಶಿ ಅವರು, ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇಶದ ಮೊದಲ ಕಾರ್ಗಿಲ್ ಸ್ತೂಪ್ ಸ್ಥಾಪನೆಯ ರೂವಾರಿಯಾಗಿಯೂ ಕೆಲಸ ಮಾಡಿದ್ದರು.
ಗುರುವಾರ ಬೆಳಗ್ಗೆ 9.30ಕ್ಕೆ ಧಾರವಾಡ ಕಾರ್ಗಿಲ್ ಸ್ತೂಪ್ ಗೆ ಅವರ ಪಾರ್ಥಿವ ಶರೀರ ಆಗಮಿಸಿತು. ಬಳಿಕ ಅಂತಿನ ನಮನ ಸಲ್ಲಿಕೆಗೆ ವ್ಯವಸ್ಥೆ ಮಾಡಲಾಗಿತ್ತು. ಇದಾದ ನಂತರ ಹೊಸ ಯಲ್ಲಾಪುರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.
Next Story