ಕೊಡಗು ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಟಿಂಬರ್ ಲಾರಿಗಳ ಸಂಚಾರ: ಸಾರ್ವಜನಿಕರ ಆಕ್ರೋಶ
ಮಡಿಕೇರಿ ಜು.11 : ಭಾರೀ ವಾಹನಗಳ ಸಾಗಾಟವನ್ನು ನಿಷೇಧಿಸಿ ಕೊಡಗು ಜಿಲ್ಲಾಡಳಿತ ಆದೇಶ ಹೊರಡಿಸಿದ್ದರೂ ಟಿಂಬರ್ ಲಾರಿಗಳ ಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ ಎಂದು ಸುಂಟಿಕೊಪ್ಪ ಭಾಗದ ಸಾರ್ವಜನಿಕರು ಆರೋಪಿಸಿದ್ದಾರೆ.
ರಾತ್ರಿ ವೇಳೆ ಭಾರೀ ಭಾರದ ವಾಹನಗಳ ಸಂಚಾರವಾಗುತ್ತಿದ್ದು, ಚೆಕ್ಪೋಸ್ಟ್ಗಳಲ್ಲಿ ಸಂಚಾರವನ್ನು ನಿಯಂತ್ರಿಸಬೇಕು. ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದ್ದು, ಅನಾಹುತಗಳು ಸಂಭವಿಸುವ ಮೊದಲು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Next Story