ಲಂಬಾಣಿ ಸಮುದಾಯದವರ ಜೊತೆ ಡಿಕೆಶಿ ಸಂವಾದ
Photo: Twitter/@INCKarnataka
ವಿಜಯಪುರ, ಜು.17: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶನಿವಾರ ವಿಜಯಪುರದ ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರ ತಾಂಡಾದಲ್ಲಿ ಲಂಬಾಣಿ ಸಮುದಾಯದವರ ಜತೆ ಅವರ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಿದರು.
ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ್ ಪಾಟೀಲ್, ಬಾಬುರಾವ್ ಚೌಹಾಣ್, ಶಿವಮೂರ್ತಿ ನಾಯ್ಕ್, ಅಪ್ಪಾಜಿ ನಾಡಗೌಡ, ಶಾಸಕರಾದ ಯಶವಂತ ರಾಯಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಮಾಜಿ ಶಾಸಕ ಮನೋಹರ್ ಐನಾಪುರ್, ಕಾಂಗ್ರೆಸ್ ಮುಖಂಡ ಬಿ.ಎಸ್. ಪಾಟೀಲ್ ಯಾಳಗಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕೆಪಿಸಿಸಿ ಕಾರ್ಯದರ್ಶಿ ಕಾಂತಾ ನಾಯ್ಕ್, ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮುಹಮ್ಮದ್ ಹಾರೀಸ್ ನಲಪಾಡ್ ಮತ್ತಿತರರು ಉಪಸ್ಥಿತರಿದ್ದರು.
Next Story