ಜುಲೈ 19 ರಿಂದ ಎಸೆಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಜು.18: ಜುಲೈ 19 ಮತ್ತು 22ರಂದು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಹಾರೈಸಿ ಟ್ವೀಟ್ ಮಾಡಿದ್ದಾರೆ.
`ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಅತ್ಯಂತ ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ' ಎಂದು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ.
— B.S. Yediyurappa (@BSYBJP) July 18, 2021
Next Story