ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ: ಹೈಕೋರ್ಟ್ಗೆ ತನಿಖಾ ವರದಿ ಸಲ್ಲಿಸಿದ ಎಸ್ಐಟಿ
ಬೆಂಗಳೂರು, ಜು.19: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ಸೋಮವಾರ ಹೈಕೋರ್ಟ್ಗೆ ತನಿಖಾ ವರದಿಯನ್ನು ಸಲ್ಲಿಸಿದೆ.
ಈ ಹಿಂದೆ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿತ್ತು. ಅದೇ ಪ್ರಕಾರ ಸೋಮವಾರ ಎಸ್ಐಟಿಯ ಹಿರಿಯ ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ರಿಜಿಸ್ಟಾರ್ಗೆ ತನಿಖಾ ವರದಿ ಸಲ್ಲಿಸಿದ್ದಾರೆ.
ಶಾಸಕ ರಮೇಶ್ ಜಾರಕಿಹೊಳಿ ಮೇಲಿನ ಬೇರೆ ಬೇರೆ ಎಫ್ಐಆರ್ಗಳ ತನಿಖಾ ವರದಿಯನ್ನು ಕೂಡ ಸಲ್ಲಿಕೆ ಮಾಡಿದ್ದು, ಜು.20ರಂದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಈ ತನಿಖಾ ವರದಿ ರವಾನೆಯಾಗಲಿದೆ.
ಮಂಗಳವಾರ ತನಿಖಾ ವರದಿ ಪರಿಶೀಲಿಸಿ ವಿಚಾರಣೆ ನಡೆಸಲಿರುವ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕಾ? ಎಸ್ಐಟಿ ತನಿಖೆಯೇ ಸಾಕಾ? ಎಂಬ ನಿರ್ಧಾರ ಕೈಗೊಳ್ಳಲಿದೆ.
Next Story