ಪಕ್ಷ ನನಗೆ ಎಲ್ಲವನ್ನು ನೀಡಿದೆ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಳಗಾವಿ, ಜು, 25: `ಬಿಜೆಪಿ ನನಗೆ ಎಲ್ಲ ಅಧಿಕಾರವನ್ನು ನೀಡಿದೆ. ಆ ಪಕ್ಷದ ಸಾಮಾನ್ಯ ಕಾರ್ಯಕರ್ತ ನಾನು. ಹೀಗಾಗಿ ಬಿಜೆಪಿ ಹೈಕಮಾಂಡ್ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ತಾವು ಸದಾ ಬದ್ದ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ರವಿವಾರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, `ನೂರು ಸಿದ್ದರಾಮಯ್ಯ ಬಂದರು ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತರುತ್ತೇವೆ. ಇದೆ ನಮ್ಮ ಮುಂದಿನ ಗುರಿ' ಎಂದು ಶಪತ ಮಾಡಿದರು.
`ಬಿಜೆಪಿ ಪಕ್ಷವು ಎಲ್ಲ ಅಧಿಕಾರವನ್ನು ನನಗೆ ನೀಡಿದೆ. ನಾವೆಲ್ಲರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು. ಹೀಗಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಯಡಿಯೂರಪ್ಪನವರಿಗೆ ಎಲ್ಲವನ್ನು ಪಕ್ಷ ನೀಡಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರ ಮೇಲೆ ನನಗೆ ವಿಶ್ವಾಸವಿದೆ ಎಂದರು.
Next Story