7ವರ್ಷದ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಸೆರೆ
ಸತೀಶ್
ಚಾಮರಾಜನಗರ : ಸುರಕ್ಷಿತವಾಗಿ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತೇನೆಂದು ಹೇಳಿ ನಂಬಿಸಿ, ಏಳು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿದ್ದಾನೆ ಎನ್ನಲಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತಲೆ ನೋವಿನಿಂದ ಬಳಲುತಿದ್ದ ತನ್ನ ಅಜ್ಜಿಗೆ ಔಷಧ ತರಲು ಜು.25ರ ರಾತ್ರಿ ಸುಮಾರು 8.30ರ ಸುಮಾರಿಗೆ ಅಂಗಡಿಗೆ ಹೋಗಿದ್ದು, ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಆರೋಪಿ ಸತೀಶ್ ಬಾಲಕಿಯನ್ನು ಮನೆಗೆ ಬಿಡುತ್ತೇನೆ ಎಂದು ಪುಸಲಾಯಿಸಿ ಸಮೀಪದ ಪೊದೆ ಬಳಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ದೂರಲಾಗಿದೆ.
ವಿಚಾರ ತಿಳಿದ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಸತೀಶ್ ನನ್ನು ಬಂಧಿಸಿದ್ದಾರೆ. ಎಸ್ಪಿ ದಿವ್ಯಾ ಸಾರಾ ಥಾಮಸ್ ಹಾಗೂ ಅಪರ ಜಿಲ್ಲಾವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ ಸಿ ನಾಗರಾಜು ಸೇರಿದಂತೆ ಇತರ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.