ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಸದಾಶಿವ ಶೆಣೈ ಅಧಿಕಾರ ಸ್ವೀಕಾರ
ಬೆಂಗಳೂರು, ಜು.26: ರಾಜ್ಯ ಮಾಧ್ಯಮ ಅಕಾಡೆಮಿಯ 14ನೇ ಅಧ್ಯಕ್ಷರಾಗಿ ಕೆ.ಸದಾಶಿವ ಶೆಣೈ ಸೋಮವಾರ ನಗರದಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಾಧ್ಯಮ ಅಕಾಡೆಮಿಯ ನೂತನ ಸದಸ್ಯರಾಗಿ ನೇಮಕವಾಗಿರುವ ಶಿವಾನಂದ ತಗಡೂರು, ಕೆ.ಕೆ.ಮೂರ್ತಿ ಹಾಗೂ ಶಿವಕುಮಾರ್ ಬೆಳ್ಳಿತಟ್ಟೆ ಉಪಸ್ಥಿತರಿದ್ದರು. ಅಲ್ಲದೆ, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎ.ಪೊನ್ನಪ್ಪ, ಬೆಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕಿರಣ್, ಹಿರಿಯ ಪತ್ರಕರ್ತರಾದ ಕೆ.ಜಿ.ವಾಸುಕಿ, ನಾರಾಯಣ್, ಮಂಜುನಾಥ್ ಅದ್ದೆ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
Next Story