ಚಿಕ್ಕನಾಯಕನಹಳ್ಳಿ: ಕೊಟ್ಟಿಗೆಗೆ ಬೆಂಕಿ; ಐದು ಜಾನುವಾರುಗಳು ಸಾವು
ತುಮಕೂರು, ಜು.27: ದನದ ಕೊಟ್ಟಿಗೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಐದು ಜಾನುವಾರು ಹಾಗೂ ದ್ವಿಚಕ್ರ ವಾಹನವೊಂದು ಬೆಂಕಿಗೆ ಆಹುತಿಯಾದ ಘಟನೆ ಚಿಕ್ಕನಾಯಕನಹಳ್ಳಿಯ ಮಾದಾಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಮಾದಾಪುರ ನಿವಾಸಿ ಪರಮೇಶ್ ಎಂಬವರಿಗೆ ಸೇರಿರುವ ಕೊಟ್ಟಿಗೆ ಇದಾಗಿದೆ. ಬೆಂಕಿಯಿಂದ ಕೊಟ್ಟಿಗೆ ಸಂಪೂರ್ಣವಾಗಿ ಭಸ್ಮವಾಗಿದ್ದು, 2 ಹೋರಿ, 2 ಕರು ಹಾಗೂ ದ್ವಿಚಕ್ರ ವಾಹನವೊಂದು ಸುಟ್ಟು ಕರಕಲಾಗಿದೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story