ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಕುಟುಂಬಕ್ಕೆ ಐದು ಲಕ್ಷ ರೂ. ನಗದು ನೀಡಿದ ಯಡಿಯೂರಪ್ಪ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರಕ್ಕೆ ಭೇಟಿ ನೀಡಿದ ಬಿ.ಎಸ್. ಯಡಿಯೂರಪ್ಪ ಅವರು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, 5 ಲಕ್ಷ ರೂ. ನಗದು ನೀಡಿದರು ಎಂದು ವರದಿಯಾಗಿದೆ.
ನಂತರ ಮಾತನಾಡಿದ ಯಡಿಯೂರಪ್ಪ ಅವರು ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೀಡುವುದಾಗಿ ರವಿ ಕುಟುಂಬಕ್ಕೆ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.
ಈ ಸಂದರ್ಭ ಯಡಿಯೂರಪ್ಪ ಅವರೊಂದಿಗೆ ವಿಜಯೇಂದ್ರ ಹಾಗು ಇತರರು ಉಪಸ್ಥಿತರಿದ್ದರು.