ಶೇ.100ರಷ್ಟು ನಾನು ಸಚಿವನಾಗುತ್ತೇನೆ: ಆರ್.ಶಂಕರ್
ಬೆಂಗಳೂರು, ಆ.1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ನೂರಕ್ಕೆ ನೂರಷ್ಟು ಸಚಿವನಾಗುವ ವಿಶ್ವಾಸ ಇದೆ ಎಂದು ಬಿಜೆಪಿ ವಿಧಾನ ಪರಿಷತ್ತಿನ ಸದಸ್ಯ ಆರ್.ಶಂಕರ್ ತಿಳಿಸಿದರು.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಬಗ್ಗೆ ನಮಗೆ ನೂರಕ್ಕೆ ನೂರು ವಿಶ್ವಾಸ ಇದೆ. ಹೀಗಾಗಿ ಪದೇ ಪದೇ ಹೇಳುವ ಅಗತ್ಯವಿಲ್ಲ. ಕಾದು ನೋಡೋಣ ಎಂದರು.
ಸಚಿವ ಆಗದೇ ಇದ್ದರೆ, ಸಿಗದೇ ಇದ್ದರೆ ಇದಕ್ಕೆಲ್ಲ ಉತ್ತರ ಇಲ್ಲ ಎಂದ ಅವರು, ನಾನು ಈಗಾಗಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದೇನೆ. ಸಂಪುಟ ರಚನೆ ಇರುವುದರಿಂದ ಏನಾದರೂ ಕೇಳೋದು ಮಾಡೋದು ಇರುತ್ತದೆ ಎಂದರು.
Next Story