ಅಂಕಿತ ಪುಸ್ತಕ ದತ್ತಿ ಪ್ರಶಸ್ತಿಗೆ ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಾಶನ ಸಂಸ್ಥೆ ಆಯ್ಕೆ
ಬೆಂಗಳೂರು, ಆ.4: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಮಾಡುವ 2021ನೇ ಸಾಲಿನ ಅಂಕಿತ ಪುಸ್ತಕ ದತ್ತಿ ಪ್ರಶಸ್ತಿಗೆ ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಾಶನ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ.
ಬುಧವಾರ ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಾಶನ ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 35ಸಾವಿರ ರೂ.ನಗದು, ಸ್ಮರಣಿಕೆಯನ್ನು ಒಳಗೊಂಡಿದೆ.
ಆ.17ರಂದು ಸಂಜೆ 4ಕ್ಕೆ ಕನ್ನಡ ಸಾಹಿತ್ಯ ಪರಿಷತ್ನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಆಯ್ಕೆ ಸಮಿತಿ ಸಭೆಯಲ್ಲಿ ಪ್ರಕಾಶ್ ಕಂಬತ್ತಳ್ಳಿ, ಕನ್ನಡ ಸಾಹಿತ್ಯ ಪರಿಷತ್ನ ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕಸಾಪ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ಉಪಸ್ಥಿತರಿದ್ದರೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story