ಸಮರ್ಥ ಕಾರ್ಯನಿರ್ವಹಣೆ: ಸಚಿವ ಎಸ್.ಟಿ.ಸೋಮಶೇಖರ್
ಬೆಂಗಳೂರು, ಆ.4: ಕಳೆದ ಬಾರಿ ಸಹಕಾರ ಸಚಿವ ಸ್ಥಾನದ ಜವಾಬ್ದಾರಿ ವಹಿಸಿಕೊಂಡ 16 ತಿಂಗಳ ಅವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ 150ಕ್ಕೂ ಹೆಚ್ಚು ಬಾರಿ ಜಿಲ್ಲೆಗೆ ಭೇಟಿ ಕೊಟ್ಟಿದ್ದೇನೆ. ಈ ಮೂಲಕ ಸಚಿವ ಸ್ಥಾನಕ್ಕೆ ನ್ಯಾಯವನ್ನು ಒದಗಿಸಿಕೊಟ್ಟು ಪ್ರಾಮಾಣಿಕವಾಗಿ ಕಾರ್ಯನಿರ್ವಹಣೆ ಮಾಡಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಇಂದು ಸಂಪುಟ ದರ್ಜೆ ಸಚಿವನಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ಇದಕ್ಕಾಗಿ ಬಿಜೆಪಿ ರಾಜ್ಯ ಮತ್ತು ಕೇಂದ್ರ ವರಿಷ್ಠ ಮಂಡಳಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಯಾವುದೇ ಖಾತೆಯನ್ನು ಕೊಟ್ಟರೂ ಸಹ ಸಮರ್ಥವಾಗಿ, ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತೇನೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story