ಸಂಪುಟ ರಚನೆ: ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ; ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟ ರಚನೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, "ರಾಜ್ಯದ ಸಚಿವ ಸಂಪುಟವನ್ನು ನೋಡಿದರೆ ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ" ಎಂದು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, 'ಈಗಾಗಲೇ ಭುಗಿಲೆದ್ದಿರುವ ಭಿನ್ನಮತವನ್ನು ನೋಡಿದರೆ ಶೀಘ್ರದಲ್ಲಿಯೇ ಮಧ್ಯಂತರ ಚುನಾವಣೆ ಎದುರಾಗಬಹುದು' ಎಂದು ಭವಿಷ್ಯ ನುಡಿದಿದ್ದಾರೆ.
ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ ಎತ್ತಿಬಂದಂತೆ ಇತ್ತೀಚಿನ ದಿನಗಳಲ್ಲಿ ಮಾತನಾಡುತ್ತಿರುವ ಬಿಜೆಪಿ ರಾಜ್ಯ ಸಚಿವಸಂಪುಟ ರಚನೆಯಲ್ಲಿ ದಲಿತ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದೆ. ರಾಜ್ಯದ ಶೇಕಡಾ 24ರಷ್ಟು ಜನಸಂಖ್ಯೆ ಇರುವ ಪರಿಶಿಷ್ಟ ಜಾತಿ-ಪಂಗಡ ಸಮುದಾಯಕ್ಕೆ ಕೇವಲ 4 ಸಚಿವರನ್ನು ನೀಡಿ ಅನ್ಯಾಯ ಎಸಗಿದೆ ಎಂದು ತಿಳಿಸಿದರು.
"ಸಾಮರ್ಥ್ಯ, ಸಾಮಾಜಿಕ ನ್ಯಾಯ, ಪ್ರಾದೇಶಿಕ ಪ್ರಾತಿನಿಧ್ಯ, ಸ್ವಚ್ಛ ರಾಜಕಾರಣ ಮೊದಲಾದ ಯಾವ ಧನಾತ್ಮಕ ಅಂಶಗಳು ಹೊಸ ಸಚಿವ ಸಂಪುಟದಲ್ಲಿ ಕಾಣಿಸುತ್ತಿಲ್ಲ. ಇತ್ತೀಚೆಗಷ್ಠೇ ಮೊಟ್ಟೆ ಖರೀದಿ ಹಗರಣದಲ್ಲಿ ಆರೋಪಿಯಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಸಚಿವಸ್ಥಾನ ನೀಡಿರುವುದು ರಾಜ್ಯ ಬಿಜೆಪಿ ಮತ್ತು ಸಂಘಪರಿವಾರದ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ" ಎಂದು ಹೇಳಿದ್ದಾರೆ.
"ನೂತನ ಸಚಿವ ಸಂಪುಟ ರಚನೆಯಲ್ಲಿ ಬಿಜೆಪಿಯೊಳಗಿರುವ ಭಿನ್ನಮತೀಯ ಗುಂಪುಗಳನ್ನು ತೃಪ್ತಿ ಪಡಿಸುವ ಸರ್ಕಸ್ ಕಾಣುತ್ತಿದೆಯೇ ಹೊರತು, ಜನಪರವಾದ ಸಮರ್ಥ ಆಡಳಿತ ನಡೆಸಬೇಕೆಂಬ ಸದುದ್ದೇಶ ಕಾಣುತ್ತಿಲ್ಲ. ಎಲ್ಲರನ್ನೂ ಓಲೈಸಲು ಪ್ರಯತ್ನ ನಡೆಸಿರುವ ಮುಖ್ಯಮಂತ್ರಿ ಯಾರಿಗೂ ಬೇಡದ ಒಲ್ಲದ ಕೂಸು ಆಗಿರುವಂತೆ ಕಾಣಿಸುತ್ತಿದೆ" ಎಂದು ಟೀಕಿಸಿದರು.
ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಜೊತೆಗಿನ ಮೂರು ದಿನಗಳ ನಿರಂತರ ಚರ್ಚೆ-ಸಮಾಲೋಚನೆಗಳ ನಂತರ ರಚನೆಯಾದ ರಾಜ್ಯದ ಸಚಿವ ಸಂಪುಟವನ್ನು ನೋಡಿದರೆ @CMofKarnataka ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ.
— Siddaramaiah (@siddaramaiah) August 4, 2021
ಈಗಾಗಲೇ ಭುಗಿಲೆದ್ದಿರುವ ಭಿನ್ನಮತವನ್ನು ನೋಡಿದರೆ ಶೀಘ್ರದಲ್ಲಿಯೇ ಮಧ್ಯಂತರ ಚುನಾವಣೆ ಎದುರಾಗಬಹುದು. 1/4#KarnatakaCabinet
ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ ಎತ್ತಿಬಂದಂತೆ ಇತ್ತೀಚಿನ ದಿನಗಳಲ್ಲಿ ಮಾತನಾಡುತ್ತಿರುವ @BJP4Karnataka ರಾಜ್ಯ ಸಚಿವಸಂಪುಟ ರಚನೆಯಲ್ಲಿ ದಲಿತ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದೆ. ರಾಜ್ಯದ ಶೇಕಡಾ 24ರಷ್ಟು ಜನಸಂಖ್ಯೆ ಇರುವ ಪರಿಶಿಷ್ಟ ಜಾತಿ-ಪಂಗಡ ಸಮುದಾಯಕ್ಕೆ ಕೇವಲ 4 ಸಚಿವರನ್ನು ನೀಡಿ ಅನ್ಯಾಯ ಎಸಗಿದೆ. 2/4#KarnatakaCabinet
— Siddaramaiah (@siddaramaiah) August 4, 2021