ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ: ಸಚಿವ ಎಂಟಿಬಿ ನಾಗರಾಜ್
ಎಂಟಿಬಿ ನಾಗರಾಜ್
ಬೆಂಗಳೂರು: ತನ್ನ ಬೇಡಿಕೆಯ ಖಾತೆ ಲಭಿಸದ ಕಾರಣಕ್ಕೆ ಅಸಮಾಧಾನಗೊಂಡಿರುವ ನೂತನ ಸಚಿವ ಎಂ.ಟಿ.ಬಿ.ನಾಗರಾಜ್ ಎರಡ್ಮೂರು ದಿನಗಳಲ್ಲಿ ತನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿದ್ದಾಗ ವಸತಿ ಸಚಿವನಾಗಿದ್ದವನು. ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದೇನೆ. ಹೀಗಾಗಿ ಅದಕ್ಕಿಂತ ಉನ್ನತವಾದ ಖಾತೆಯನ್ನು ನೀಡುತ್ತಾರೆಂಬ ನಿರೀಕ್ಷೆ ಇತ್ತು. ಲೋಕೋಪಯೋಗಿ, ಇಂಧನ, ಸಾರಿಗೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಇಲಾಖೆಗಳನ್ನು ನನಗೆ ನೀಡಬಹುದಿತ್ತು. ಆದರೆ, ಸಿಎಂ ಬೊಮ್ಮಾಯಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ನೀಡಿದ್ದಾರೆ. ವರಿಷ್ಟರ ಜತೆ ಚರ್ಚಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಹೀಗಾಗಿ ಖಾತೆ ಬದಲಿಸುತ್ತಾರೆಂಬ ನಂಬಿಕೆ ನನಗಿಲ್ಲ. ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಇಂದು ನಾಗರಾಜ್ ಅವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿ ಖಾತೆ ಹಂಚಿಕೆ ವಿಚಾರವಾಗಿ ಚರ್ಚಿಸಿದ್ದರು.
Next Story