ಚಾಮರಾಜನಗರ : ಶಾಲೆ, ಕಾಲೇಜು ಆರಂಭ ವಿರೋಧಿಸಿ ಪ್ರತಿಭಟನೆ
ಚಾಮರಾಜನಗರ : 9 ನೇ ತರಗತಿಯಿಂದ 12ನೇ ತರಗತಿ ತನಕ ಶಾಲೆ, ಕಾಲೇಜು ಆರಂಭ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕ ಎಂದು ಆರೋಪಿಸಿ ಕನ್ನಡ ಚಳವಳಿಗಾರರು ಚಾಮರಾಜನಗರದಲ್ಲಿ ರವಿವಾರ ಪ್ರತಿಭಟಿಸಿದರು.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ಉದ್ಯಾನವನ ಮುಂಭಾಗ ಕರ್ನಾಟಕ ಸೇನಾ ಪಡೆಯ ನೇತೃತ್ವದಲ್ಲಿ ಸಮಾವೇಶಗೊಂಡ ಚಳವಳಿಗಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೋರನ ಲಸಿಕೆ ನೀಡದೇ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದರೆ ಸೋಂಕು ಹೆಚ್ಚಾಗಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸ್ ಗೌಡ, ನಿಜಧ್ವನಿ ಗೋವಿಂದರಾಜು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
Next Story