ರಾಜ್ಯದಲ್ಲಿ ಇನ್ನೆರಡು ದಿನ ಮುಂದುವರೆಯಲಿದೆ ಮಳೆ
ಬೆಂಗಳೂರು, ಆ.22: ಎರಡು ವಾರಗಳಿಂದ ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಚೇತರಿಕೆ ಕಂಡಿದೆ. ಕಳೆದೆರಡು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ.
ಕೆಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಿದ್ದರೆ ಮತ್ತೆ ಕೆಲವೆಡೆ ಉತ್ತಮ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಅರಬ್ಬೀ ಸಮುದ್ರದಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ಸೃಷ್ಟಿಯಾಗಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದಲೂ ರಾಜ್ಯದ ಹಲವೆಡೆ ಚದುರಿದಂತೆ ಮಳೆಯಾಗಿದೆ.
ಆ.24ರವರೆಗೂ ಇದೇ ರೀತಿ ಮಳೆ ಮುಂದುವರೆಯಲಿದೆ. ಕರಾವಳಿ ಭಾಗ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
Next Story