ರಾಜ್ಯದಿಂದ ತಮಿಳುನಾಡಿಗೆ ನಾಳೆಯಿಂದ ಬಸ್ ಸಂಚಾರ ಪುನರಾರಂಭ
ಬೆಂಗಳೂರು: ಕೋವಿಡ್ ನಿರ್ಬಂಧದಿಂದಾಗಿ ಸ್ಥಗಿತಗೊಂಡಿದ್ದ ಕರ್ನಾಟಕ- ತಮಿಳುನಾಡು ಕೆಎಸ್ಸಾರ್ಟಿಸಿ ಬಸ್ ಸಂಚಾರ ಸೋಮವಾರದಿಂದ(ಅ. 23) ಪುನರಾರಂಭವಾಗಲಿದೆ.
ಹೊಸೂರು, ವೆಲ್ಲೂರು, ತಿರುವಣ್ಣಾಮಲೈ, ವಿಲ್ಲುಪುರಂ, ತಿರುಕೊಯಿಲೂರು, ಕೊಯಮತ್ತೂರು, ತಿರುನಲ್ಲಾರ್, ತಿರುಚ್ಚಿ, ಮಧುರೈ, ಚೆನ್ನೈ, ಊಟಿ ಇತ್ಯಾದಿ ಸ್ಥಳಗಳಿಗೆ ಸುಮಾರು 250 ಬಸ್ ಗಳು ಸಂಚರಿಸಲಿದೆ.
ಕೊರೋನ ಪ್ರಕರಣ ಹೆಚ್ಚಳದಿಂದಾಗಿ ಕರ್ನಾಟಕ -ತಮಿಳುನಾಡು ಮಧ್ಯೆ ಏ.27 ರಿಂದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು.
Next Story