ಖಾತೆ ಹಂಚಿಕೆ ಅಸಮಾಧಾನ: ಆನಂದ್ ಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು ಎಂದ ಸಚಿವ ಆರ್.ಅಶೋಕ್
ಬೆಂಗಳೂರು, ಆ.24: ಪ್ರವಾಸೋದ್ಯಮ ಸಚಿವರಾಗಿ ವಿಜಯನಗರ ಶಾಸಕ ಆನಂದ್ ಸಿಂಗ್ ಮಂಗಳವಾರ ಅಧಿಕಾರ ಸ್ವೀಕರಿಸಿದ್ದು, ಅವರು ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು. ಸಂಗತಿಯನ್ನು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ನಾನು ಈ ಹಿಂದೆ ಆನಂದ್ ಸಿಂಗ್ ರನ್ನು ಭೇಟಿಯಾಗಿದ್ದೆ, ಆಗ ಸಮಸ್ಯೆ ಹೇಳಿಕೊಂಡಿದ್ದರು. ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿದ್ದೇವೆ ಎಂದರು.
ಮುಖ್ಯಮಂತ್ರಿ ಒಂದೆರಡು ದಿನಗಳಲ್ಲಿ ಹೊಸದಿಲ್ಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಅಲ್ಲಿ ಅವರು ಆನಂದ್ ಸಿಂಗ್ ಜೊತೆಗಿನ ಚರ್ಚೆಯನ್ನು ಪಕ್ಷದ ಹೈಕಮಾಂಡ್ಗೆ ತಲುಪಿಸುತ್ತಾರೆ. ಪಕ್ಷದಲ್ಲಿ ಅಸಮಾಧಾನವೇನು ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಉತ್ತಮ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಆಡಳಿತ ನೀಡಲಾಗುವುದು ಎಂದು ಅವರು ಹೇಳಿದರು.
Next Story