ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಸಚಿವ ಈಶ್ವರಪ್ಪರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ
ಬೆಂಗಳೂರು: 'ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ' ಎಂದು ಸಚಿವ ಕೆ.ಎಸ್ ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.
''ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ,ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ'' ಎಂದು ಹೇಳಿದ್ದಾರೆ.
''ಕೊರೊನ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?'' ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ.
— Siddaramaiah (@siddaramaiah) August 31, 2021
ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?@BJP4Karnataka #PressMeet
8/9
ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ.
— Siddaramaiah (@siddaramaiah) August 31, 2021
ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?@BJP4Karnataka #PressMeet
8/9