ಕಾಂಗ್ರೆಸ್ ಶಾಸಕಿಯ ಆಪ್ತನಿಗೆ ಪೊಲೀಸ್ ಕಮಿಷನರ್ ಹಲ್ಲೆ ಪ್ರಕರಣ: ಸಿದ್ದರಾಮಯ್ಯ ಖಂಡನೆ
ಕಲಬುರಗಿ, ಸೆ.2: ಕಾಂಗ್ರೆಸ್ ಶಾಸಕಿ ಖನೀಝ್ ಫಾತಿಮಾ ಅವರ ಆಪ್ತ ಸಹಾಯಕ ಆದಿಲ್ ಸುಲ್ತಾನ್ ರಿಗೆ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ಥಳಿಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಕಮಿಷನರ್ ವಿರುದ್ಧ ಕಾನೂನು ಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ .
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಗುಲ್ಬರ್ಗಾ ಪೊಲೀಸ್ ಆಯುಕ್ತರು ಹಲ್ಲೆ ನಡೆಸಿದ್ದು, ಘಟನೆಯನ್ನು ನಾನು ಖಂಡಿಸುತ್ತೇನೆ. ಆಯುಕ್ತರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮತ್ತು ಸಂತ್ರಸ್ತನಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು' ರಾಜ್ಯದ ಮುಖ್ಯಮಂತ್ರಿಗಳನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Next Story