ಶಿವಮೊಗ್ಗ: ಬಿಯರ್ ಬಾಟಲಿಯಿಂದ ಹಲ್ಲೆ; ದೂರು
ಶಿವಮೊಗ್ಗ, ಸೆ.3 ನಗರದ ಗಾರ್ಡನ್ ಏರಿಯಾದ ಬಾರ್ ಆಂಡ್ ರೆಸ್ಟೋರೆಂಟ್ವೊಂದರಲ್ಲಿ ವ್ಯಕ್ತಿಯೊಬ್ಬರ ಮೇಲೆ ಬೀಯರ್ ಬಾಟಲಿಯಿಂದ ಹಲ್ಲೆ ಮಾಡಿರುವಗಗ ಘಟನೆ ಗುರುವಾರ ರಾತ್ರಿ ನಡೆದಿದೆ.
ಗಾಂಧಿ ಬಜಾರ್ ನಿವಾಸಿ ಯೋಗೇಶ್(48) ಎಂಬಾತನ ತಲೆಗೆ ಸವಾಯಿಪಾಳ್ಯ ಶಾಹೀದ್ ಖಾನ್ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಗೇಶ್ ಮೆಗ್ಗಾನ್ನಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story