ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಐವರಿಗೆ ಗಂಭೀರ ಗಾಯ
ಶಿವಮೊಗ್ಗ: ನಗರದ ವಾಜಪೇಯಿ ಬಡಾವಣೆಯ ತೂಕ ಮತ್ತು ಅಳತೆ ಮಾಪನ ಇಲಾಖೆ ಸಮೀಪ ಪರಸ್ಪರ ಎರಡು ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ.
ಮೂಲತಃ ಹಾವೇರಿಯವರಾದ ಅಭಿಷೇಕ್, ಮಧುಸೂದನ್, ಸಚಿನ್ ಎಂಬುವವರು ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್ನಲ್ಲಿದ್ದರು. ಗಾಯಾಳುಗಳಲ್ಲಿ ಇನ್ನಿಬ್ಬರ ಬಗ್ಗೆ ಮಾಹಿತಿ ಲಭಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂವರು ವಿದ್ಯಾರ್ಥಿಗಳು ಶಿವಮೊಗ್ಗ ನಗರದಿಂದ ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಹಾಸ್ಟೆಲ್ ಕಡೆಗೆ ಹೋಗುವಾಗ ಎದುರುಗಡೆಯಿಂದ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story