ವಿದ್ಯಾರ್ಥಿನಿಯರಿಗೆ ಹಲ್ಲೆ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಎಸ್.ಎಫ್.ಐ ಆಗ್ರಹ
ಕೋಲಾರ : ಇತ್ತೀಚಿಗೆ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಕ್ರಾಸ್ ಬಳಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್.ಎಫ್.ಐ ವಿಧ್ಯಾರ್ಥಿ ಸಂಘಟನೆ ಶ್ರೀನಿವಾಸಪುರ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಬಸ್ಸಿನಿಂದ ಕೆಳಗಿಳಿಸಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ನಡೆಸಿ, ರಕ್ಷಣೆಗೆ ಬಂದ ಪೋಷಕರ ಮೇಲೂ ದೊಣ್ಣೆಗಳಿಂದ ಹಲ್ಲೆ ನಡೆಸಿರುವ ಪುಂಡರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಮತ್ತು ನಗರದ ಶಾಲಾ-ಕಾಲೇಜುಗಳಿಗೆ ಬರುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್.ಎಫ್.ಐ ಸಂಘಟನೆಯ ಕೋಲಾರ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ್, ತಾಲ್ಲೂಕು ಅಧ್ಯಕ್ಷ ಉದಯ್, ಜಂಟಿ ಕಾರ್ಯದರ್ಶಿ ಚೈತ್ರ ಮತ್ತು ನೂರಾರು ವಿಧ್ಯಾರ್ಥಿನಿಯರು ಭಾಗವಹಿಸಿದ್ದರು
Next Story