ಕಲಬುರಗಿ: ನಕಲಿ ಸಹಿ ಆರೋಪ; ಸಹಕಾರ ಸಂಘದ ಕಾರ್ಯದರ್ಶಿಗೆ ರೈತರಿಂದ ಹಲ್ಲೆ
ಕಲಬುರಗಿ: ನಕಲಿ ಸಹಿ ಮಾಡಿ ರೈತರ ಹೆಸರಿನ ಮೇಲೆ ಸಾಲ ಪಡೆದಿದ್ದಾರೆ ಎಂದು ಆರೋಪಿಸಿ ಜೇವರ್ಗಿಯ ಯಡ್ರಾಮಿ ತಾಲೂಕಿನ ಯಲಗೋಡ ಸಹಕಾರ ಸಂಘದ ಕಾರ್ಯದರ್ಶಿ ರಾಯಪ್ಪಗೌಡ ಮೇಲೆ ರೈತರು ಬಟ್ಟೆ ಬಿಚ್ಚಿ ಮನಬಂದಂತೆ ಥಳಿಸಿದ್ದಾರೆ.
ರಾಯಪ್ಪಗೌಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ರೈತರ ನಕಲಿ ಸಹಿ ಮಾಡಿ ಕೊಟ್ಯಂತರ ರೂ. ಲೂಟಿ ಮಾಡಿರುವ ಬಗ್ಗೆ ಆರೋಪ ಕೇಳಿ ಬರುತ್ತಿದೆ.
ರೈತರ ಹೆಸರಿನ ಮೇಲೆ ನಕಲಿ ಸಹಿ ಹಾಗೂ ಸಹಕಾರ ಸಂಘವನ್ನು ದುರುಪಯೋಗಪಡಿಸಿಕೊಂಡಿದ್ದರ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ಸಹ ಸಲ್ಲಿಸಲಾಗಿತ್ತು. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶಗೊಂಡ ಕೆಲವು ರೈತರು ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ತಾಲೂಕಿನ ಹಲವು ಕಡೆ ರೈತರ ಹೆಸರಿನ ಮೇಲೆ ಸಾಲ ಪಡೆದಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.
Next Story