ಸರ್ಕಾರಿ ಬಸ್ ಪಲ್ಟಿ, ಹಲವರಿಗೆ ಗಾಯ
ಹೊಲಕ್ಕೆ ಉರುಳಿ ಬಿದ್ದ ಬಸ್
ಶಹಾಪುರ: ಸಾರಿಗೆ ಬಸ್ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಇತರ 15 ಮಂದಿ ಪ್ರಯಾಣಿಕರಿಗೆ ಸಣ್ಣಪುಟಗಾಯಗಳಾಗಿರುವ ಘಟನೆ ಇಂದು ತಾಲೂಕಿ ಅನವಾರ ಗ್ರಾಮದ ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಯಾಗಿಲ್ಲ ಎಂದು ತಿಳಿದುಬಂದಿದೆ.
30 ರಿಂದ 40 ಜನರನ್ನ ಹೊತ್ತು ಶಹಾಪುರದಿಂದ ಯಾದಗಿರಿಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಹೊಲಕ್ಕೆ ಉರುಳಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ನಾಲ್ವರ ಕಾಲಿಗೆ ಗಂಭೀರ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story