ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಸೆ.17: ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅ.4ಕ್ಕೆ ಮುಂದೂಡಿದೆ.
ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಿತು. ಹೈಕೋರ್ಟ್ಗೆ ಶುಕ್ರವಾರ ಬಿಬಿಎಂಪಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಕೈಗೊಂಡ ಕ್ರಮ ಕುರಿತು ಮಾಹಿತಿ ನೀಡಬೇಕಿತ್ತು. ಜತೆಗೆ ತೆರವಿಗೆ ಕಾಲಮಿತಿ ನಿಗದಿಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ನ್ಯಾಯಪೀಠವು ಸೂಚಿಸಿತ್ತು.
ಈ ಬಗ್ಗೆ ಮಾಹಿತಿ ನೀಡಬೇಕಿದ್ದ ರಾಜ್ಯ ಸರಕಾರ ವಾದಮಂಡನೆಗೆ ಕಾಲಾವಕಾಶ ಕೋರಿದೆ. ಹೀಗಾಗಿ, ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿದೆ.
Next Story