'ರಾಜ್ಯದಲ್ಲಿ ಬಿಜೆಪಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದೆ': ಕಾಂಗ್ರೆಸ್ ಆರೋಪ
ಬೆಂಗಳೂರು: ಮುಖ್ಯಮಂತ್ರಿಗಳಿಗೆ ಕೊಲೆ ಬೆದರಿಕೆ ಪ್ರಕಣಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 'ಬಿಜೆಪಿ ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದೆ' ಎಂದು ಆರೋಪಿಸಿದೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
''ರಾಜ್ಯದ ಕಾನೂನು ಸುವ್ಯವಸ್ಥೆ ಅದೆಷ್ಟು ಅಧೋಗತಿಗೆ ಇಳಿದಿದೆ ಎಂದೆರೆ, ಗೃಹ ಮಂತ್ರಿಯೇ ನನ್ನ ಅತ್ಯಾಚಾರವಾಗುತ್ತಿದೆ ಎನ್ನುವಷ್ಟು, ಮುಖ್ಯಮಂತ್ರಿಗಳಿಗೇ ಕೊಲೆ ಬೆದರಿಕೆ ಹಾಕಿಯೂ ಆರೋಪಿಗಳು ರಾಜಾರೋಷವಾಗಿ ತಿರುಗುವಷ್ಟು. ಇನ್ನು ಸಾಮಾನ್ಯ ಜನತೆಗೆ ರಕ್ಷಣೆ ಸಿಗುವುದೇ?'' ಎಂದು ಪ್ರಶ್ನಿಸಿದೆ.
'ಮೊನ್ನೆ ಒಬ್ಬ ಭಯೋತ್ಪಾದಕ ಕತ್ತಿ, ತಲ್ವಾರ್ ಮನೆಯಲಿಟ್ಟುಕೊಳ್ಳಿ ಎಂದು ಕಾನೂನು ಬಾಹಿರದ ಮಾತಾಡುತ್ತಾನೆ, ಮತ್ತೊಬ್ಬ ಮೈಸೂರಿನ ಅಧಿಕಾರಿಗಳಿಗೆ ಕೊಲೆ ಬೆದರಿಕೆಯೊಡ್ಡುತ್ತಾನೆ ,ಇನ್ನೊಬ್ಬ ಮುಖ್ಯಮಂತ್ರಿಗೇ ಜೀವ ಬೆದರಿಕೆ ಹಾಕುತ್ತಾನೆ' ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
'ಮುಖ್ಯಮಂತ್ರಿಯವರೇ, ಈ ಕ್ರಿಮಿಗಳನ್ನು ಬಂಧಿಸದಿರುವುದೇಕೆ? ನಿಮ್ಮ ಸರ್ಕಾರವೇ ಇವರನ್ನು ಸಾಕುತ್ತಿದೆ ' ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮೊನ್ನೆ ಒಬ್ಬ ಭಯೋತ್ಪಾದಕ ಕತ್ತಿ, ತಲ್ವಾರ್ ಮನೆಯಲಿಟ್ಟುಕೊಳ್ಳಿ ಎಂದು ಕಾನೂನು ಬಾಹಿರದ ಮಾತಾಡುತ್ತಾನೆ
— Karnataka Congress (@INCKarnataka) September 19, 2021
ಮತ್ತೊಬ್ಬ ಮೈಸೂರಿನ ಅಧಿಕಾರಿಗಳಿಗೆ ಕೊಲೆ ಬೆದರಿಕೆಯೊಡ್ಡುತ್ತಾನೆ
ಇನ್ನೊಬ್ಬ ಮುಖ್ಯಮಂತ್ರಿಗೇ ಜೀವ ಬೆದರಿಕೆ ಹಾಕುತ್ತಾನೆ
ಈ ಕ್ರಿಮಿಗಳನ್ನು ಬಂಧಿಸದಿರುವುದೇಕೆ @BSBommaiಅವರೇ ನಿಮ್ಮ ಸರ್ಕಾರವೇ ಇವರನ್ನು ಸಾಕುತ್ತಿದೆ
ರಾಜ್ಯದ ಕಾನೂನು ಸುವ್ಯವಸ್ಥೆ ಅದೆಷ್ಟು ಅಧೋಗತಿಗೆ ಇಳಿದಿದೆ ಎಂದೆರೆ,
— Karnataka Congress (@INCKarnataka) September 19, 2021
ಗೃಹ ಮಂತ್ರಿಯೇ ನನ್ನ ಅತ್ಯಾಚಾರವಾಗುತ್ತಿದೆ ಎನ್ನುವಷ್ಟು,
ಮುಖ್ಯಮಂತ್ರಿಗಳಿಗೇ ಕೊಲೆ ಬೆದರಿಕೆ ಹಾಕಿಯೂ ಆರೋಪಿಗಳು ರಾಜಾರೋಷವಾಗಿ ತಿರುಗುವಷ್ಟು.
ಇನ್ನು ಸಾಮಾನ್ಯ ಜನತೆಗೆ ರಕ್ಷಣೆ ಸಿಗುವುದೇ?@BJP4Karnataka ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದೆ.