ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಾಗಿಲ್ಲ: ಕಾಂಗ್ರೆಸ್ ಆರೋಪ
ಬೆಂಗಳೂರು: ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಾಗಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ಈಗಾಗಲೇ ಬೆಲೆ ಏರಿಕೆಯಿಂದ ಜನರ ಬದುಕು ಹೈರಾಣಾಗಿದೆ, ಇದರ ನಡುವೆಯೇ ಕೇಂದ್ರ ಸರ್ಕಾರ ಮತ್ತಷ್ಟು ವಸ್ತುಗಳ ಮೇಲಿನ ಜಿಎಸ್ಟಿ ಹೆಚ್ಚಿಸಿ ಜನರ ಬದುಕನ್ನು ಮತ್ತಷ್ಟು ದುಬಾರಿಯಾಗಿಸಿದೆ. ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ಸರ್ಕಾರ ಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಈಗಾಗಲೇ ಬೆಲೆ ಏರಿಕೆಯಿಂದ ಜನರ ಬದುಕು ಹೈರಾಣಾಗಿದೆ, ಇದರ ನಡುವೆಯೇ ಕೇಂದ್ರ ಸರ್ಕಾರ ಮತ್ತಷ್ಟು ವಸ್ತುಗಳ ಮೇಲಿನ ಜಿಎಸ್ಟಿ ಹೆಚ್ಚಿಸಿ ಜನರ ಬದುಕನ್ನು ಮತ್ತಷ್ಟು ದುಬಾರಿಯಾಗಿಸಿದೆ.
— Karnataka Congress (@INCKarnataka) September 20, 2021
ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ಸರ್ಕಾರ ಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕುತ್ತಿದೆ.
ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ.
Next Story