ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು
ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ.
ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು ಕುಂಬಾರ (7) ಮೃತ ಬಾಲಕ ಎಂದು ಗುರುತಿಸಲಾಗಿದೆ. ಎನ್.ಜಿ.ಓ. ಕಾಲೋನಿಯ ಹನುಮಾನ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಆಟವಾಡುತ್ತಿದ್ದ ಬಾಲಕ ಆಕಸ್ಮಾತಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಎಂದಿನಂತೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಕಸ್ಮಿಕವಾಗಿ ಅರ್ಥಿಂಗ್ ಕೇಬಲ್ ಮೇಲೆ ಮತ್ತು ಜಂಕ್ಷನ್ ಬಾಕ್ಸ್ ಕೈ ಇಟ್ಟಿದ್ದರಿಂದ ಈ ಘಟನೆ ಸಂಭವಿಸಿದೆ.
Next Story