ಉಪ ಲೋಕಾಯುಕ್ತರ ಹುದ್ದೆ ಭರ್ತಿಗೆ ಪ್ರಕ್ರಿಯೆ ಆರಂಭ: ವರದಿ
ಬೆಂಗಳೂರು, ಅ.15: ಕರ್ನಾಟಕ ಲೋಕಾಯುಕ್ತದಲ್ಲಿ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಈ ಸಂಬಂಧ ಹೈಕೋರ್ಟ್ಗೆ ಅನುಪಾಲನಾ ವರದಿ ಸಲ್ಲಿಕೆಯಾಗಿದ್ದು, ಅರ್ಜಿದಾರ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೆ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಪ್ರಸಕ್ತ ವರ್ಷದ ಜ.27ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆ ನಡೆಸಿತ್ತು.
ಇದರನ್ವಯ ರಾಜ್ಯ ಸರಕಾರ ಉಪ ಲೋಕಾಯುಕ್ತರನ್ನು ನೇಮಕ ಮಾಡುವ ಸಂಬಂಧ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಸರಕಾರ ಕೈಗೊಂಡ ನಿರ್ಧಾರವನ್ನು ಲಿಖಿತವಾಗಿ ಸಲ್ಲಿಸಲು 3 ವಾರ ಕಾಲಾವಕಾಶ ನೀಡಬೇಕೆಂದು ಸರಕಾರ ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ.
ಪ್ರಕರಣದ ವಿಚಾರಣೆಯನ್ನು ನ.8ಕ್ಕೆ ನಿಗದಿಪಡಿಸಲಾಗಿದೆ.
Next Story